ಕಾಂಗ್ರೆಸ್ ನಾಯಕಿಗೆ ಸಿಗದ ಟಿಕೆಟ್; ಕಣ್ಣೀರು ಸುರಿಸಿ ಬೇಸರ!

ಬಾಗಲಕೋಟೆ: ಟಿಕೆಟ್ ತಪ್ಪಿರುವ ಹಿನ್ನೆಲೆಯಲ್ಲಿ ವೀಣಾ ಕಾಶಪ್ಪನವರ ಸ್ವಾಭಿಮಾನಿ ಕಾರ್ಯಕರ್ತರ ಹಾಗೂ ಮುಖಂಡರ ಸಭೆ ನಡೆಸಿದ ನಂತರ ಕಣ್ಣೀರು ಸುರಿಸಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್ ಸಿಗುತ್ತದೆ ಎಂಬ ಭರವಸೆ ಇತ್ತು. ಆದರೆ ಹೇಗೆ ಟಿಕೆಟ್ ಕೈ ತಪ್ಪಿದೆ ಎಂದು ಗೊತ್ತಾಗಲಿಲ್ಲ. ನಾಯಕರು ನಮ್ಮ ಜಿಲ್ಲೆಯ ಸ್ವಾಭಿಮಾನವನ್ನು ಮಾರಿಕೊಂಡಿದ್ದಾರೆ. ಪಕ್ಷಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದೆ, ಯಾರಿಂದ ಟಿಕೆಟ್ ತಪ್ಪಿತು ಎಂಬುವುದು ಗೊತ್ತಿಲ್ಲ ಎಂದು ಕಣ್ಣೀರು ಸುರಿಸಿದ್ದಾರೆ.

ರಾಜ್ಯ ನಾಯಕರನ್ನು ಕೇಳಿದರೆ ಜಿಲ್ಲಾ ನಾಯಕರ ಹೆಸರು ಹೇಳ್ತಾರೆ. ಜಿಲ್ಲಾ ನಾಯಕರನ್ನು ಕೇಳಿದ್ರೆ ರಾಜ್ಯ ನಾಯಕರ ಹೆಸರು ಹೇಳುತ್ತಿದ್ದಾರೆ. ಕಾರ್ಯಕರ್ತರ ಅಭಿಪ್ರಾಯ ಸ್ವೀಕರಿಸಿದ ಸ್ವತಂತ್ರ ಸ್ಪರ್ಧೆ ಬಗ್ಗೆ ನಿರ್ಧರಿಸುತ್ತೇನೆ ಎಂದು ತಿಳಿಸಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವವಣೆಗೆ ಬಾಗಲಕೋಟೆಯಿಂದ ಸಂಯುಕ್ತಾ ಪಾಟೀಲ್‌ ಅವರಿಗೆ ಕಾಂಗ್ರೆಸ್‌ನಿಂದ ಟಿಕೆಟ್‌ ನೀಡಲಾಗಿದ್ದು, ವೀಣಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಹಂಚಿಕೊಳ್ಳಿ