ರೇವಣ್ಣ ಮಕ್ಕಳು ಜೈಲಲ್ಲಿ; ತಂದೆ ಹೇಳಿದ್ದೇನು?

ಬೆಂಗಳೂರು : ನನ್ನ ಮಕ್ಕಳು ತಪ್ಪು ಮಾಡಿದ್ದರೆ ಅವರಿಗೆ ತಕ್ಕ ಶಿಕ್ಷೆಯಾಗಲಿ. ಪ್ರಜ್ವಲ್ (Prajwal Revanna) ಮತ್ತು ಸೂರಜ್ (Suraj Revanna) ಬಂಧನದ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ. ಎಲ್ಲದಕ್ಕೂ ಕಾಲವೇ ಉತ್ತರಿಸಲಿದೆ ಎಂದು ಮಾಜಿ ಸಚಿವ ರೇವಣ್ಣ (Revanna) ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್, ಸೂರಜ್ ಬಂಧನದ ವಿಚಾರ ನಾನು ಅದರ ಬಗ್ಗೆ ಈಗ ಏನು ಹೇಳುವುದಿಲ್ಲ. ಯಾರೇ ತಪ್ಪು ‌ಮಾಡಿದ್ರು ಕಾನೂನು ಇದೆ. ನಾನು ಯಾರನ್ನು ವಹಿಸಿಕೊಂಡು ಮಾತನಾಡುವುದಿಲ್ಲ. ಕಾನೂನಿನ ಬಗ್ಗೆ ನನಗೆ ಗೌರವ ಇದೆ. ನ್ಯಾಯಾಂಗ ಹಾಗೂ ದೇವರ ಬಗ್ಗೆ ನನಗೆ ಅಪಾರ ನಂಬಿಕೆ ಇದೆ ಎಂದು ಹೇಳಿದ್ದಾರೆ.

ಪೆನ್ ಡ್ರೈವ್ ಲೀಕ್ ನಲ್ಲಿ ಮಾಜಿ ಶಾಸಕ ಪ್ರೀತಂಗೌಡಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಅವರೆಲ್ಲ ದೊಡ್ಡವರು ಇದ್ದಾರೆ‌. ನಾನು ಅವರ ಬಗ್ಗೆ ಮಾತನಾಡುವುದಿಲ್ಲ. ಕೋರ್ಟ್‌ನಲ್ಲಿ ವಿಷಯ ಇರುವಾಗ ಮಾತನಾಡುವುದು ಸರಿಯಲ್ಲ. ನಾನಂತೂ ರಾಜಕೀಯ ನಿವೃತ್ತಿ ಪಡೆಯುವುದಿಲ್ಲ. ಇರುವಷ್ಟು ದಿನ ಜನರ ಸೇವೆ ಮಾಡಿಕೊಂಡು ಹೋಗುತ್ತೇನೆ ಎಂದು ಹೇಳಿದ್ದಾರೆ.

ಈ ಸುದ್ದಿ ಹಂಚಿಕೊಳ್ಳಿ