ಮುಡಾ ಪ್ರಕರಣ ಸಿಬಿಐಗೆ ವಹಿಸುವಂತೆ ಮೈಸೂರು ಸಂಸದ ಯುದವೀರ್ ಒಡೆಯರ್ ಆಗ್ರಹ

ರಾಜ್ಯದಲ್ಲಿ ವಾಲ್ಮೀಕಿ ನಿಗಮ ಹಗರಣ, ಪೆಟ್ರೋಲ್ ಡೀಸೆಲ್ ದರ ಏರಿಕೆ ವಿಚಾರಕ್ಕೆ ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಮುಗಿಬಿದ್ದಿವೆ. ಇದರ ಬೆನ್ನಲ್ಲಿಯೇ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಕೇಳಿ ಬಂದಿದೆ.

ಈ ಮಧ್ಯೆ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷಗಳು ಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿವೆ. ಈಗ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಮೈಸೂರು ಮುಡಾ ಹಗರಣ ವಿಚಾರವಾಗಿ ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮತಾನಾಡಿರುವ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್, ಇದೊಂದು ಗಂಭೀರ ಪ್ರಕರಣವಾಗಿದೆ. ಇದನ್ನ ಸಿಬಿಐ ತನಿಖೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಪ್ರಕರಣದಲ್ಲಿ ಯಾವುದೇ ಪ್ರಭಾವಿಲ್ಲದಂತಹ ಸಂಸ್ಥೆಯಿಂದ ತನಿಖೆ ನಡೆಸುವ ಅಗತ್ಯವಿದೆ. ಈ ಪ್ರಕರಣವನ್ನು ನಮ್ಮ ಪಕ್ಷವು ಗಂಭೀರವಾಗಿ ಪರಿಗಣಿಸಿದೆ. ಹಗರಣದ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವವರಿಗೆ ನಮ್ಮ ಪಕ್ಷ ಹೋರಾಟ ಮುಂದುವರಿಸುತ್ತದೆ. ಈ ಹಗರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಹಂಚಿಕೊಳ್ಳಿ