ಮಂಡ್ಯ: ಮಂಡ್ಯದಲ್ಲಿ ಮೈತ್ರಿ ಟಿಕೆಟ್ ನನಗೆ ಸಿಗುವ ಭರವಸೆ ಇದೆ ಎಂದು ಸಂಸದೆ ಸುಮಲತಾ ಹೇಳಿದ್ದಾರೆ.ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ 100 ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ಸಿಗಲಿದೆ. ಯಶ್-ದರ್ಶನ್ ದೊಡ್ಡ ಶಕ್ತಿ ಬರುವುದಿದ್ದರೂ ಸ್ವಾಗತ ಮಾಡುತ್ತೇನೆ. ಸದ್ಯಕ್ಕೆ ದೆಹಲಿಗೆ ಹೋಗುವ ಯಾವ ಅವಶ್ಯಕತೆ ಇಲ್ಲ. ಬರಲು ಹೇಳಿದರೆ ಮಾತ್ರ ಹೋಗುತ್ತೇನೆ. ಆದರೆ, ಟಿಕೆಟ್ ನನಗೆ ಸಿಗಲಿದೆ ಎಂದು ಹೇಳಿದ್ದಾರೆ.ಮಂಡ್ಯದಲ್ಲಿ ನನ್ನ ಮನೆ ಇದೆ. ಅದು ರೆಂಟ್ ಮನೆ. ಅಂಬರೀಶ್ ಇದ್ದ ಕಾಲದಿಂದಲೂ ಮಂಡ್ಯದಲ್ಲಿ ಬಾಡಿಗೆ… Read More
ಬೆಂಗಳೂರು: ಗುಜರಾತ್ ಜೈಂಟ್ಸ್ ವಿರುದ್ಧ ಡೆಲ್ಲಿ ತಂಡ ಭರ್ಜರಿ ಜಯ ದಾಖಲಿಸಿದೆ.ಮೆಗ್ ಲ್ಯಾನಿಂಗ್ ಅರ್ಧಶತಕ ಹಾಗೂ ಜೆಸ್ ಜೊನಾಸೆನ್, ಅನ್ನಾಬೆಲ್ ಸದರ್ಲೆಂಡ್ ಬೌಲಿಂಗ್ ದಾಳಿಯಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 25 ರನ್ ಗಳ ಜಯ ಸಾಧಿಸಿದೆ. ಟಾಸ್ ಗೆದ್ದ ಗುಜರಾತ್ ತಂಡವು ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 164 ರನ್ ಸಿಡಿಸಿತು. ಗುರಿ ಬೆನ್ನಟ್ಟಿದ ಗುಜರಾತ್ ತಂಡ 8 ವಿಕೆಟ್ ಕಳೆದುಕೊಂಡು 138 ರನ್ ಗಳನ್ನು ಮಾತ್ರ ಗಳಿಸಲು ಯಶಸ್ವಿಯಾಯಿತು.ಆರಂಭದಲ್ಲಿ ಡೆಲ್ಲಿ… Read More
ಮಂಗಳೂರು: ಈಜಲು ತೆರಳಿದ್ದ ಮೂವರು ಯುವಕರು ನೀರು ಪಾಲಾಗಿರುವ ಘಟನೆ ನಡೆದಿದೆ.ಮಂಗಳೂರು ಹೊರವಲಯದ ಪಣಂಬೂರು ಬೀಚ್ ನಲ್ಲಿ ಈ ಘಟನೆ ನಡೆದಿದೆ. ಲನ್(20), ಲಿಖಿತ್(18), ನಾಗರಾಜ್(24) ಸಾವನ್ನಪ್ಪಿದ ಯುವಕರು. ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಮಿಲನ್, ಪಿಯುಸಿ ವಿದ್ಯಾರ್ಥಿ ಲಿಖಿತ್, ನಾಗರಾಜ್ ಕಂಪನಿಯೊಂದರಲ್ಲಿ ಸೂಪರ್ ವೈಸರ್ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.ಸ್ಥಳೀಯ ಮೀನುಗಾರರು ಇದನ್ನು ಗಮನಿಸಿದ್ದಾರೆ. ಸದ್ಯ ಈ ಕುರಿತು ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ ಸೆಲೆಬ್ರಿಟಿ ತಂಡವು ಚೆನ್ನೈ ರೈನೋಸ್ ತಂಡವನ್ನು 67 ರನ್ ಗಳಿಂದ ಮಣಿಸಿ ಭರ್ಜರಿ ಜಯ ಸಾಧಿಸಿತು.ಈ ಮೂಲಕ ಕರ್ನಾಟಕ ಬುಲ್ಡೋಜರ್ಸ್ ತಂಡ ಈ ಲೀಗ್ ನಲ್ಲಿ ಸತತ ಮೂರನೇ ಜಯ ದಾಖಲಿಸಿತು. ಮೊದಲ ಪಂದ್ಯದಲ್ಲಿ ಮುಂಬೈ ಹೀರೋಸ್ ತಂಡವನ್ನು ಮಣಿಸಿದ್ದ ಪಡೆ, ಎರಡನೇ ಪಂದ್ಯದಲ್ಲಿ ಬೆಂಗಾಲ್ ಟೈಗರ್ಸ್ ತಂಡವನ್ನು 30 ರನ್ಗಳಿಂದ ಸೋಲಿಸುತ್ತು. ಸದ್ಯ ಮೂರನೇ ಪಂದ್ಯದಲ್ಲಿ ಚೆನ್ನೈ ರೈನೋಸ್ ತಂಡದ ವಿರುದ್ಧ ಗೆಲುವು ಕಂಡಿದೆ. ಈ ಮೂಲಕ ಕರ್ನಾಟಕ ತಂಡದ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ.ಟಾಸ್… Read More
ಇಸ್ಲಾಮಾಬಾದ್: ಭೀಕರ ಮಳೆಗೆ 37 ಜನ ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದಲ್ಲಿ ವರದಿಯಾಗಿದೆ.ಪಾಕ್ ದೇಶದ ಹಲವು ಪ್ರದೇಶಗಲ್ಲಿ ಭೀಕರ ಮಳೆಯಾಗುತ್ತಿದ್ದು, ಹಲವೆಡೆ ಮನೆ ಹಾಗೂ ಭೂ ಕುಸಿತವಾಗಿದೆ. ಜನ-ಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದ್ದು, ರಸ್ತೆಗಳು ಜಲಾವೃತವಾಗಿವೆ.ಅಫ್ಘಾನಿಸ್ತಾನದ ಗಡಿಯಲ್ಲಿನ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಸುಮಾರು 10 ಜಿಲ್ಲೆಗಳಲ್ಲಿಯೇ ವ್ಯಾಪಕ ಮಳೆ ಸುರಿದಿದೆ. ಅಲ್ಲದೇ, ಮಳೆಯಿಂದಾಗಿ ಹಲವರು ಗಾಯಗೊಂಡಿದ್ದು, ಸೂಕ್ತ ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಅಲ್ಲದೇ, ವ್ಯಾಪಕವಾಗಿ ಹಿಮ ಕೂ ಬಿದ್ದಿದ್ದು ಚೀನಾದೊಂದಿಗೆ ಸಂಪರ್ಕಿಸುವ ಕಾರಕೋರಂ ಹೆದ್ದಾರಿ ಬಂದ್ ಆಗಿದೆ.… Read More
ನವದೆಹಲಿ: ದೇಶದಲ್ಲಿ ಲೋಕಸಭೆ ಚುನಾವಣೆಯ ತಯಾರಿ ಭರ್ಜರಿಯಾಗಿ ನಡೆದಿದ್ದು, ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, ಕೇಂದ್ರದ 34 ಹಾಲಿ ಸಚಿವರು ಹಾಗೂ ಇನ್ನಿತರ ಪ್ರಮುಖರಿಗೆ ಮಣೆ ಹಾಕಿದೆ.ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 370 ಸ್ಥಾನ ಗೆಲ್ಲುವ ಗುರಿ ಹೊಂದಿದೆ. ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಿಸುವ ಮೊದಲೇ ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಈ ಮೂಲಕ ಚುನಾವಣಾ ತಯಾರಿ ಆರಂಭಿಸಿದೆ.ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಉತ್ತರ ಪ್ರದೇಶದ ವಾರಣಾಸಿಯಿಂದ ಸ್ಪರ್ಧಿಸಲಿದ್ದಾರೆ.… Read More
ಬೆಂಗಳೂರು: ಇಲ್ಲಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಪೊಲೀಸರು ಶಂಕಿತನ ಜಾಡು ಹಿಡಿದಿದ್ದಾರೆ.ಶಂಕಿತ ಆರೋಪಿ ಬಿಎಂಟಿಸಿ ವೋಲ್ವೋ ಡಿಪೋ- 13ರ ಕಾಮಾಕ್ಯಗೆ ಸೇರಿದ್ದ ಕೆಎ- 57- F 186 ನಂಬರಿನ ಬನಶಂಕರಿ ಯಿಂದ ಐಟಿಪಿಎಲ್ ಮಾರ್ಗವಾಗಿ ತೆರಳುತ್ತಿದ್ದ ಬಸ್ ನಲ್ಲಿ ಪ್ರಯಾಣಿಸಿದ್ದಾನೆ ಎನ್ನಲಾಗಿದೆ.ಈತ ಕುಂದಹಳ್ಳಿಯಿಂದ ಬಸ್ ಹತ್ತಿ ನಂತರ ಸಿಎಂಆರ್ ಐಟಿ ಕಾಲೇಜು ನಿಲ್ದಾಣದಲ್ಲಿ ಇಳಿದುಕೊಂಡಿದ್ದಾನೆ. ಈ ಕುರಿತು ಸಿಸಿಟಿವಿ ವಿಡಿಯೋ ಪರಿಶೀಲಿಸಿ ಸಂಬಂಧಪಟ್ಟವರ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ.ಹೀಗಾಗಿ ಮೆಜೆಸ್ಟಿಕ್ ಹಾಗೂ ಬಸ್… Read More
ಮೈಸೂರು: ಕ್ಯಾಂಟರ್ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ದಂಪತಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಈ ಘಟನೆ ಜಿಲ್ಲೆಯ ಹುಣಸೂರಿನಲ್ಲಿನ ಕನಕ ಭವನದ ಹತ್ತಿರ ನಡೆದಿದೆ. ಮಂಜುನಾಥ ಬಡಾವಣೆಯ ನಿವಾಸಿ ರಾಜು (64) ಮತ್ತು ಅವರ ಪತ್ನಿ ಸುನಂದಾ (55) ಸಾವನ್ನಪ್ಪಿದ ದುರ್ದೈವಿಗಳು. ಹುಣಸೂರು ಮಾರ್ಗವಾಗಿ ಬರುತ್ತಿದ್ದ ಕ್ಯಾಂಟರ್ ವೇಗವಾಗಿ ಬಂದು ಬೈಕ್ ಗೆ ಡಿಕ್ಕಿ ಹೊಡೆದಿದೆ.ಈ ವೇಳೆ ದಂಪತಿ ಕೆಳಗೆ ಬಿದ್ದಿದ್ದಾರೆ. ತೀವ್ರ ರಕ್ತಸ್ರಾವದಿಂದಾಗಿ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸ್ಥಳೀಯರು ಚಾಲಕನನ್ನು ಹಿಡಿದು ಪೊಲೀಸರಿಗೆ… Read More
ಕೊಡಗು: ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಆಯ ತಪ್ಪಿ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಡೆದಿದೆ.ಈ ಘಟನೆ ಮಡಿಕೇರಿಯಲ್ಲಿ ನಡೆದಿದ್ದು, ಕೋಲ್ಕತ್ತಾ ಮೂಲದ ರಾಕಿಬ್ (22) ಸಾವನ್ನಪ್ಪಿದ ಕಾರ್ಮಿಕ ಎನ್ನಲಾಗಿದೆ.ರಾಕಿಬ್ ಇಂದು ಬೆಳಿಗ್ಗೆ ಕಟ್ಟಡದ ಕಿಟಕಿ ಕೆಲ ಮಾಡುತ್ತಿದ್ದ. ಈ ವೇಳೆ ಆಯ ತಪ್ಪಿ 30 ಅಡಿ ಎತ್ತರದಿಂದ ಸಿಮೆಂಟ್ ನೆಲಕ್ಕೆ ಬಿದ್ದ ಗಂಭೀರವಾಗಿ ಗಾಯಗೊಂಡಿದ್ದಾರೆ. ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ… Read More
ನವದೆಹಲಿ: 2008ರ ಮುಂಬಯಿ ಭಯೋತ್ಪಾದನಾ ದಾಳಿಯ ಪ್ರಮುಖ ರೂವಾರಿಯಾಗಿದ್ದ ಅಜಮ್ ಚೀಮಾ ಸಾವನ್ನಪ್ಪಿದ್ದಾನೆ ಎಂದು ಮೂಲಗಳು ತಿಳಿಸಿವೆ.70 ವರ್ಷದ ಚೀಮಾ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಈತ 2006ರ ಮುಂಬಯಿ ರೈಲು ಸ್ಫೋಟದ ಮಾಸ್ಟರ್ ಮೈಂಡ್ ಕೂಡ ಆಗಿದ್ದ ಎನ್ನಲಾಗಿದೆ.ಈ ಪಾಪಿ ಹಲವಾರು ಪೈಶಾಚಿಕ ಕೃತ್ಯಗಳನ್ನು ಎಸಗಿದ್ದ. ಮುಂಬಯಿ ತಾಜ್ ಹೋಟೆಲ್ ಮೇಲೆ ನಡೆದ ದಾಳಿಯ ಸಂಚು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ. ಈ ವೇಳೆ 175 ಜನ ಸಾವನ್ನಪ್ಪಿ, 300ಕ್ಕೂ ಅಧಿಕ ಜನರು ಗಾಯಗೊಂಡಿದ್ದರು.… Read More
