‘ಬಂಟ ಯಾನೆ ನಾಡವ’ ಎರಡೂ ಒಂದೇ ಜಾತಿ ಎಂಬ ವಾಸ್ತವ ಪರಿಗಣಿಸಿ, ವಿದ್ಯಾರ್ಥಿಗಳಿಗೆ ಜಾತಿ ಪ್ರಮಾಣ ಪತ್ರವನ್ನು ನೀಡುವಂತೆ, ‘ತಹಶೀಲ್ದಾರ್’ಗೆ ಮನವಿ..

Compressed by jpeg-recompress

ವಿದ್ಯಾರ್ಥಿಗಳ ಪ್ರಸ್ತುತ ದಾಖಲೆಗಳನ್ನು ಪಡೆದುಕೊಳ್ಳುವುದರ ಮೂಲಕ ಅಥವಾ ಓ.ಟಿ.ಸಿಮುಖಾಂತರ ಜಾತಿ ಪ್ರಮಾಣ ಪತ್ರವನ್ನು ನೀಡುವ ಕುರಿತು, ಬಂಟರ ಯಾನೆ ನಾಡವರ ಸಂಘ (ರಿ.), ಬೈಂದೂರು ವತಿಯಿಂದ, ಬೈಂದೂರು ತಹಶೀಲ್ದಾರ್ ಗೆ ಮನವಿ ಪತ್ರ ಸಲ್ಲಿಸಲಾಯಿತು.

ಬೈಂದೂರು ಬಂಟ ಸಂಘದ ಅಧ್ಯಕ್ಷರಾದ ಶಶಿಧರ್ ಶೆಟ್ಟಿ ಸಾಲ್ಗೆದ್ದೆ ಮಾತಮಾಡಿ,
“ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಹಿಂದಿನಿಂದಲೂ ‘ಬಂಟರ ಯಾನೆ ನಾಡವ’ ಎಂಬುವುದು ಎರಡು ಒಂದೇ ಆಗಿರುತ್ತದೆ. ಅದೇ ರೀತಿ ಕಳೆದ ಐವತ್ತು ವರ್ಷದ ಹಿಂದೆ “ಹಿಂದೂ ನಾಡವ ಅಥವಾ ನಾಡವ” ಎಂಬುದಾಗಿ ಕೆಲವೊಂದು ದಾಖಲೆಗಳಲ್ಲಿ ನಮೂದಾಗಿರುತ್ತದೆ. ಅದೇ ರೀತಿ 1925ರ ನಂತರದ ದಿನಗಳಲ್ಲಿ ‘ಹಿಂದೂ ನಾಡವ’ ಬದಲಿಗೆ ‘ಹಿಂದೂ ಬಂಟ’ ಎಂದು, ಎಲ್ಲಾ ದಾಖಲೆಗಳಲ್ಲಿ ನಮೂದಾಗಿರುತ್ತದೆ. ಆದ್ದರಿಂದ ‘ಬಂಟ ಯಾನೆ ನಾಡವ’ ಎನ್ನುವುದು ಒಂದೇ ಆಗಿರುತ್ತದೆ. ಕೆಲವೊಂದು ಕುಟುಂಬದಲ್ಲಿ ಅನಕ್ಷರಸ್ಥರಿರುವುದರಿಂದ ಮತ್ತು ಕೆಲವೊಂದು ದಾಖಲೆಗಳಲ್ಲಿ ನಾಡವ ಎನ್ನುವುದು ನಮೂದಾಗಿದ್ದು ಮತ್ತು ಬಂಟ ಅಥವಾ ನಾಡವ ಎನ್ನುವುದರ ಬಗ್ಗೆ ಈಗಲೂ ಕೂಡ ಅವರಲ್ಲಿರುವ ಶಾಲಾ ದಾಖಲೆಗಳಲ್ಲಿ ನಮೂದಾಗಿರುವುದಿಲ್ಲ. ನಾವು ತಮ್ಮಲ್ಲಿ ಕೇಳಿಕೊಳ್ಳುವುದೇನೆಂದರೆ, ನಾಡವ ಯಾನೆ ಬಂಟ ಅಥವಾ ಹಿಂದೂ ನಾಡವ ಅಥವಾ ಹಿಂದೂ ಬಂಟ ಇವೆಲ್ಲವೂ 3ಬಿಯ ಅಡಿಯಲ್ಲಿ ಬರುವುದರಿಂದ, ಸದರಿ ವಿಚಾರವನ್ನು ಗಣನೆಗೆ ತೆಗೆದುಕೊಂಡು, ಜಾತಿ ಪ್ರಮಾಣ ಪತ್ರವನ್ನು ನೀಡಬೇಕಾಗಿ ಕೇಳಿಕೊಳ್ಳುವುದಾಗಿದೆ” ಎಂದರು

ಶಿರೂರು ಬಂಟರ ಸಂಘದ ಮಾಜಿ ಅಧ್ಯಕ್ಷರು ಪುಷ್ಪರಾಜ್ ಶೆಟ್ಟಿ ಅವರು ಮಾತನಾಡಿ,
“ಪ್ರಸ್ತುತ ಶಾಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯಲು ಹಾಗೂ ಉದ್ಯೋಗವನ್ನು ಪಡೆಯಲು ಜಾತಿ ಪ್ರಮಾಣ ಪತ್ರ ಅಗತ್ಯವಿರುವುದರಿಂದ ಸಂಬಂಧಪಟ್ಟ ಕಛೇರಿಗಳಲ್ಲಿ ಜಾತಿ ಪ್ರಮಾಣ ಪತ್ರವನ್ನು ನೀಡಲು ತಿಳಿಸಿದರೇ, ತಂದೆಯ ಶಾಲಾ ದಾಖಲಾತಿ ಮತ್ತು ಜಾತಿ ಪ್ರಮಾಣ ಪತ್ರ ಕೇಳುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ತುಂಬಾ ಸಮಸ್ಯೆಯಾಗಿ, ಜಾತಿ ಪ್ರಮಾಣ ಪತ್ರ ಸಿಗುತ್ತಿಲ್ಲ. ಹಾಗಾಗಿ, ತಮ್ಮಲ್ಲಿ ತಿಳಿಸುವುದೆನೆಂದರೆ, ‘ಬಂಟ ಯಾನೆ ನಾಡವ’ ಎನ್ನುವುದು ಎರಡೂ ಕೂಡ ಒಂದೇ ಜಾತಿ ಆಗಿರುತ್ತದೆ. ಕಳೆದ ಒಂದು ವರ್ಷದ ಹಿಂದೆ ಓಟಿಸಿ, ಮುಖಾಂತರ ಅಂದರೆ ಕುಟುಂಬದ ಪಡಿತರ ಚೀಟಿಯನ್ನು ಗಣನೆಗೆ ತೆಗೆದುಕೊಂಡು, ಜಾತಿ ಪ್ರಮಾಣ ಪತ್ರವನ್ನು ತಮ್ಮ ಕಛೇರಿಯಲ್ಲಿ ಮತ್ತು ಗ್ರಾಮ ಒಂದರಲ್ಲಿ ಕೂಡ ನೀಡುತ್ತಿದ್ದು, ಅಲ್ಲದೇ ಬಂಟ ಯಾನೆ ನಾಡವ ಎನ್ನುವುದರ ಬಗ್ಗೆ ಸಂಬಂಧಪಟ್ಟ ಪಂಚಾಯತ್‌ನಲ್ಲಿ ಕುಟುಂಬದ ದಾಖಲೆಗಳನ್ನು ಪಡೆದುಕೊಂಡು ಸಾಕ್ಷಿದಾರರ ಮಹಜರನ್ನು ಮಾಡಿಕೊಂಡು ಸಹಾ ‘ಜಾತಿ ಪ್ರಮಾಣ ಪತ್ರ’ವನ್ನು ನಮ್ಮ ಈ ಭಾಗದಲ್ಲಿ ಮತ್ತು ಕುಂದಾಪುರದಲ್ಲಿ ಕೂಡಾ ನೀಡುತ್ತಿದ್ದಾರೆ” ಎಂದು ವಾಸ್ತವ ಬಿಚ್ಚಿಟ್ಟರು.

Compressed by jpeg-recompress

ಉಪಾಧ್ಯಕ್ಷರಾದ ಗೋಕುಲ್ ಶೆಟ್ಟಿ ಉಪ್ಪುಂದ ಅವರು ಮಾತನಾಡಿ,
“ಈಗಾಗಲೇ ಈ ರೀತಿಯಾಗಿ ದಾಖಲೆಯನ್ನು ಪಡೆದುಕೊಂಡು ಜಾತಿ ಪ್ರಮಾಣ ಪತ್ರವನ್ನು ನೀಡಿರುವ ತಮ್ಮ ಕಛೇರಿಯಲ್ಲಿ ಪ್ರಸ್ತುತ ವಿದ್ಯಾರ್ಥಿಗಳಿಗೆ ಜಾತಿ ಪ್ರಮಾಣ ಪತ್ರಕ್ಕೆ ಅರ್ಜಿ ನೀಡಿದರೆ ‘ತಂದೆಯ ದಾಖಲೆಯನ್ನು ನೀಡಿದರೇ ಮಾತ್ರವೇ, ‘ಜಾತಿ ಪ್ರಮಾಣ ಪತ್ರ’ ನೀಡುವುದಾಗಿ ತಿಳಿಸಿದ್ದಿರಿ’. ಆದರೆ ತಂದೆಯ ದಾಖಲೆಗಳಲ್ಲಿ ನಾಡವ ಎಂದು ನಮೂದಾಗಿದ್ದರೂ, ಅದನ್ನು ಗಣನೆಗೆ ತೆಗೆದುಕೊಳ್ಳದೇ ಇರುವುದು, ಶಾಲಾ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಆದ್ದರಿಂದ ತಮ್ಮಲ್ಲಿ ಮೂಲಕ ಕೇಳಿಕೊಳ್ಳುವುದೇನೆಂದರೆ, ಪ್ರಸ್ತುತ ಶಾಲಾ ಮಕ್ಕಳ ಆಧಾರ್ ಕಾರ್ಡ್, ಪಡಿತರ ಚೀಟಿ, ಜನನ ಪ್ರಮಾಣ ಪತ್ರವನ್ನು ತೆಗೆದುಕೊಂಡು ಜಾತಿ ಪ್ರಮಾಣ ಪತ್ರವನ್ನು ನೀಡಬೇಕು ಅಥವಾ ಒಂದು ವರ್ಷದ ಹಿಂದೆ ಇರುವ ಓ.ಟಿ.ಸಿ. ಮುಖಾಂತರ ಜಾತಿ ಪ್ರಮಾಣ ಪತ್ರವನ್ನು ನೀಡಿದರೆ, ವಿದ್ಯಾರ್ಥಿಗಳಿಗೆ ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಳ್ಳಲು ಅನುಕೂಲವಾಗುತ್ತದೆ. ಶಿಕ್ಷಣವನ್ನು ಪಡೆದು ಉನ್ನತ ಉದ್ಯೋಗಕ್ಕೆ ಹೋಗುತ್ತಿರುವ ವಿದ್ಯಾರ್ಥಿಗಳಿಗೆ ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಳ್ಳಲು ಈ ರೀತಿಯಲ್ಲಿ ಸಣ್ಣ ಪುಟ್ಟ ಸಮಸ್ಯೆಯಾದರೆ, ವಿದ್ಯಾರ್ಥಿಗಳ ಉಜ್ವಲ ಭವಿಷ್ಯವನ್ನು ರೂಪಿಸಲು ಹೇಗೆ ಸಾಧ್ಯ? ಆದ್ದರಿಂದ ತಾವು ನಾಡವ, ಬಂಟ ಯಾನೆ ನಾಡವ, ಹಿಂದೂ ಬಂಟ, ಹಿಂದೂ ನಾಡವ ಈ ರೀತಿಯಲ್ಲಿ ಯಾವುದೇ ದಾಖಲೆಯನ್ನು ನೀಡಿದ್ದರೆ ಅಥವಾ ಮೇಲೆ ತಿಳಿಸಿದಂತೆ ವಿದ್ಯಾರ್ಥಿಗಳ ಮತ್ತು ಕುಟುಂಬದ ದಾಖಲೆಗಳನ್ನು ಪರಿಶೀಲಿಸಿ ಬಂಟ ಅಥವಾ ನಾಡವ ಬಂಟ ಪ್ರಕಾರ ‘3ಬಿ’ ಅಡಿಯಲ್ಲಿ ಜಾತಿ ಪ್ರಮಾಣ ಪತ್ರವನ್ನು ನೀಡಬೇಕಾಗಿ
ನೀವು ತಿಳಿಸುವ ಹಾಗೇ ತಂದೆಯ ಜಾತಿ ಪ್ರಮಾಣ ಪತ್ರದಲ್ಲಿ ನಾಡವ ಎಂದು ನಮೂದಾಗಿದ್ದರೆ ಹಾಗೂ ಇನ್ನು ಕೆಲವರ ದಾಖಲೆಗಳಲ್ಲಿ ಬಂಟ ಅಥವಾ ನಾಡವ ಎನ್ನುವುದು ನಮೂದಾಗದೇ ಇರುವುದರಿಂದ ಈ ರೀತಿಯ ದಾಖಲೆಗಳನ್ನು ಪ್ರಸ್ತುತ ವಿದ್ಯಾರ್ಥಿಗಳಿಗೆ ನೀಡಲು ಸಾಧ್ಯವಿಲ್ಲ. ಹಾಗಾಗಿ, ಮೇಲೆ ತಿಳಿಸಿದ ರೀತಿಯಲ್ಲಿ ಜಾತಿ ಪ್ರಮಾಣ ಪತ್ರವನ್ನು ವಿದ್ಯಾರ್ಥಿಗಳಿಗೆ ನೀಡಿದರೆ ಅವರವರ ಭವಿಷ್ಯವನ್ನು ನೋಡಿಕೊಳ್ಳಲು ಸಹಾಯವಾಗುತ್ತದೆ” ಎಂದು ಅಸಹಾಯಕ ವಿದ್ಯಾರ್ಥಿಗಳ ಪರ ತಹಶೀಲ್ದಾರರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಜಗನ್ನಾಥ್ ಶೆಟ್ಟಿನಾಕಟ್ಟೆ, ಜೊತೆ ಕಾರ್ಯದರ್ಶಿ ಜಯರಾಮ್ ಶೆಟ್ಟಿ ಗಂಟಿಹೊಳೆ, ಮನೋಹರ್ ಶೆಟ್ಟಿ ಉಪ್ಪುಂದ,
N.ದಿವಾಕರ್ ಶೆಟ್ಟಿ ನೆಲ್ಯಾಡಿ, ಜಯರಾಮ್ ಶೆಟ್ಟಿ ಬಿಜೂರು, ಸಂತೋಷ ಕುಮಾರ್ ಶೆಟ್ಟಿ , ಶಾಮ್ ಶೆಟ್ಟಿ ನಾಕಟ್ಟೆ, ನಿತಿನ್ ಬಿ ಶೆಟ್ಟಿ , ಚಂದ್ರಶೀಲ ಶೆಟ್ಟಿ ನಾವುಂದ ಉಪಸ್ಥಿತರಿದ್ದರು.

ಒಟ್ಟಿನಲ್ಲಿ, ಬಂಟ (ಶೆಟ್ಟಿ) ಎಂದು ದಾಖಲೆ ಹೊಂದಿರುವ ವಿದ್ಯಾರ್ಥಿಗಳಿಗೆ ಮಾತ್ರ ಜಾತಿ ಪ್ರಮಾಣ ಪತ್ರ ನೀಡುತ್ತಿದ್ದು, ‘ನಾಡವ’ ಎಂಬ ದಾಖಲೆಗಳನ್ನು ತೆಗೆದುಕೊಂಡು ಹೋದ ವಿದ್ಯಾರ್ಥಿಗಳಿಗೆ, ಪ್ರಮಾಣ ಪತ್ರ ಕೊಡಲು ತಹಶೀಲ್ದಾರ್ ಕಛೇರಿಯಲ್ಲಿ ತಕರಾರು ಮಾಡ್ತಿದ್ದಾರಂತೆ. ಈ ‘ನಾಡವ’ರು ಕೂಡ ‘ಬಂಟ’ರೇ ಎಂಬುದು ಪ್ರಮಾಣೀಕರಿ ಜಾತಿ ಪ್ರಮಾಣ ಪತ್ರ ನೀಡಿರಿ ಎಂಬುದು ಇವರ ಮನವಿ. ಬಂಟರಿಗೆ ಈಗ ‘3ಬಿ’ ಅಡಿಯಲ್ಲಿ ಪ್ರಮಾಣಪತ್ರ ಸಿಗುತ್ತಿದೆ.

ಈ ಸುದ್ದಿ ಹಂಚಿಕೊಳ್ಳಿ