Uncategorized, ದಾವಣಗೆರೆ
May 31, 2024
40 views 1 sec 0

ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಏರುಪೇರು; ಐಸಿಯುನಲ್ಲಿ ಚಿಕಿತ್ಸೆ

ದಾವಣಗೆರೆ: ಹಿರಿಯ ರಾಜಕಾರಣಿಯಾಗಿರುವ ಹಾಗೂ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೃದಯ ಸಂಬಂಧಿ ಹಾಗೂ ಕಫದ ತೊಂದರೆಯಿಂದ ಶಾಮನೂರು ಶಿವಶಂಕರಪ್ಪ ಬಳಲುತ್ತಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ದಾವಣಗೆರೆ ಎಸ್ ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಉಸಿರಾಟದ ತೊಂದರೆ ಹಿನ್ನಲೆಯಲ್ಲಿ ಫೇಸ್ ಮೇಕರ್ ಅಳವಡಿಕೆ ಮಾಡಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಅಭಿಮಾನಿಗಳು ಸಹಜವಾಗಿ… Read More

Uncategorized
May 25, 2024
43 views 1 sec 0

ಕೇರಳದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ; ಹಲವೆಡೆ ಜನ- ಜೀವನ ಅಸ್ತವ್ಯಸ್ಥ!

ತಿರುವನಂತಪುರಂ: ಕೇರಳದ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಕೇರಳದ (Kerala) 7 ಜಿಲ್ಲೆಗಳಲ್ಲಿ ಶನಿವಾರ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರಂ, ಕೊಲ್ಲಂ, ಅಲಪ್ಪುಳ, ಎರ್ನಾಕುಲಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ‌ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೇರಳದಲ್ಲಿ ವ್ಯಾಪಕ ಮಳೆಯಿಂದಾಗಿ ಸಾವು- ನೋವುಗಳು ಸಂಭವಿಸಿವೆ. ಹಲವೆಡೆ ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಮೇ 9 ರಿಂದ ಮೇ 23 ರವರೆಗೆ ಕೇರಳದಲ್ಲಿ ಮಳೆಗೆ… Read More

Uncategorized
May 24, 2024
52 views 0 secs 0

ಹೊಸಬರ ಚಿತ್ರ ತಂಡದಿಂದ ಸ್ಟಾರ್ ನಟರಿಗೆ ಠಕ್ಕರ್!

ಇತ್ತೀಚೆಗೆ ಹೊಸಬರ ಚಿತ್ರಗಳಿಗೂ ಕೂಡ ಮಾನ್ಯತೆ ಸಿಗುತ್ತಿದ್ದು, ಹಲವು ಸ್ಟಾರ್ ಗಳು ರಾತ್ರೋ ರಾತ್ರಿ ಬೆಳೆಯುತ್ತಿದ್ದಾರೆ. ಈ ಸಾಲಿಗೆ ಈಗ ಲಾಪತಾ ಲೇಡೀಸ್ ಚಿತ್ರ ಬಂದು ನಿಂತಿದೆ. ಕೇವಲ ನಾಲ್ಕು ಕೋಟಿ ಬಜೆಟ್ ನಲ್ಲಿ ನಿರ್ಮಿಸಲಾಗಿರುವ ಈ ಸಿನಿಮಾ ನೂರಾರು ಕೋಟಿ ಬಜೆಟ್ ಸ್ಟಾರ್ ನಟರ ಸಿನಿಮಾ ಆಗಿರುವ ‘ಅನಿಮಲ್’ (Animal) ನ್ನು ಹಿಂದಿಕ್ಕಿದೆ. ಯಾವುದೇ ಸ್ಟಾರ್ ನಟರಿಲ್ಲದ, ಸರಳವಾದ ಕತೆಯನ್ನಷ್ಟೆ ಹೊಂದಿದ್ದ ಈ ಸಿನಿಮಾ ಸೂಪರ್ ಹಿಟ್ ಆಗಿದೆ. ಬ್ಲಾಕ್ ಬಸ್ಟರ್ ಸಿನಿಮಾ ‘ಅನಿಮಲ್’ ಅನ್ನು… Read More

Uncategorized
May 22, 2024
46 views 0 secs 0

ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ

ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಹಲವಡೆ ಮೇ. 28ರ ವರೆಗೆ ಭರ್ಜರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯಿದ್ದು, ಈ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ,ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ,… Read More

Uncategorized
May 21, 2024
38 views 2 secs 0

ಕೇರಳದಲ್ಲಿ ಅಬ್ಬರಿಸುತ್ತಿರುವ ಮಳೆ; ತಯಾರಾಗಬೇಕಿದೆ ಕರ್ನಾಟಕ!

ತಿರುವನಂತಪುರಂ: ಕೇರಳದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಕೇರಳದ ಪತ್ತನಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ. ಮೇ 22ರಂದು ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ. ಕೇರಳದ (Kerala Weather Today) ರಾಜಧಾನಿ ತಿರುವನಂತಪುರಂ ಸೇರಿದಂತೆ 8 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೇರಳದ ಉತ್ತರ ಭಾಗದ 6 ಜಿಲ್ಲೆಗಳಿಗೆ ಹಳದಿ… Read More

Uncategorized
May 19, 2024
59 views 1 sec 0

ಸೋಮವಾರ 5ನೇ ಹಂತದ ಮತದಾನ; ಸಕಲ ಸಿದ್ಧತೆ

ನವದೆಹಲಿ: ದೇಶದಲ್ಲಿ ನಾಳೆ (ಮೇ 20) ಎರಡನೇ ಹಂತದ ಮತದಾನ (Loksabha Elections 2024) ನಡೆಯುತ್ತಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಐದನೇ ಹಂತದಲ್ಲಿ 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ 49 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಈಗಾಗಲೇ ಮಹಾರಾಷ್ಟ್ರ ಮತ್ತು ಲಡಾಖ್ ತಮ್ಮ ಮತದಾನ ಪ್ರಕ್ರಿಯೆ ಪೂರ್ಣಗೊಳಿಸಿಕೊಂಡಿವೆ. ಉತ್ತರ ಪ್ರದೇಶ (14/80 ಸ್ಥಾನಗಳು), ಪಶ್ಚಿಮ ಬಂಗಾಳ (7/42 ಸ್ಥಾನಗಳು), ಬಿಹಾರ (5/40 ಸ್ಥಾನಗಳು), ಒಡಿಶಾ (5/21 ಸ್ಥಾನಗಳು), ಜಾರ್ಖಂಡ್ (3/14 ಸ್ಥಾನಗಳು) ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ… Read More

Uncategorized
May 14, 2024
57 views 0 secs 0

ಮೇ 14ರಂದು ರವಿಯೋಗ ದಿನ! ಯಾವ ರಾಶಿಯವರಿಗೆ ಲಾಭ?

ಮೇ 14ರಂದು ಚಂದ್ರನು ತನ್ನದೇ ಆದ ಕರ್ಕ ರಾಶಿಯಲ್ಲಿ ಸಾಗಲಿದ್ದು, ಸರ್ವಾರ್ಥ ಸಿದ್ಧಿ ಯೋಗ, ರವಿಯೋಗ ನಡೆಯಲಿದೆ. ಹೀಗಾಗಿ ಈ ದಿನ ಯಾವ ರಾಶಿಯವರ ಫಲ ಹೇಗಿದೆ?ಮೇಷ ರಾಶಿಆಸ್ತಿ ಸಂಬಂಧಿತ ವಿವಾದಗಳಿಂದ ನೀವು ಪರಿಹಾರವನ್ನು ಪಡೆಯುತ್ತೀರಿ. ವಿದ್ಯಾರ್ಥಿಗಳು ತಮ್ಮ ವೃತ್ತಿ ಜೀವನದಲ್ಲಿ ಅಗಾಧವಾದ ಯಶಸ್ಸನ್ನು ಪಡೆಯುತ್ತಾರೆ. ಕೌಟುಂಬಿಕ ಜೀವನದಲ್ಲಿ ಜವಾಬ್ದಾರಿ ಹೆಚ್ಚಲಿದೆ. ಭೌತಿಕ ಸಂತೋಷ ಮತ್ತು ಸಂಪತ್ತು ಹೆಚ್ಚಾಗುವ ಸಾಧ್ಯತೆಗಳಿವೆ.ವೃಷಭ ರಾಶಿತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದನ್ನು ತಪ್ಪಿಸಿ. ಉದ್ಯೋಗ ಮತ್ತು ವ್ಯಾಪಾರಕ್ಕೆ ವಾತಾವರಣವು ಅನುಕೂಲಕರವಾಗಿರುತ್ತದೆ. ಸಾಮಾಜಿಕ ಕಾರ್ಯಕ್ರಮಗಳಲ್ಲಿ… Read More

Uncategorized
May 11, 2024
49 views 3 secs 0

ಲೈಂಗಿಕ ಕಿರುಕುಳ ಆರೋಪ; ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ!

ಹಾಸನ: ವಕೀಲ ದೇವರಾಜೇಗೌಡರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಿನ್ಸಿಪಲ್‌ ಸಿ.ಜೆ‌. ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಸಿದ್ದರಾಮ್.ಎಸ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಜ್ವಲ್ ರೇವಣ್ಣ (Prajwal Revanna) ಪೆನ್‌ಡ್ರೈವ್ ಪ್ರಕರಣದಲ್ಲಿ (Pendrive Case) ದೇವರಾಜೇಗೌಡ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಆದರೆ, ಪೊಲೀಸರು ಚಿತ್ರದುರ್ಗ (Chitradurga) ಜಿಲ್ಲೆ ಹಿರಿಯೂರು (Hiriyuru) ತಾಲೂಕಿನ ಗುಯಿಲಾಳ್ ಟೋಲ್ ಬಳಿ ದೇವರಾಜೇಗೌಡರನ್ನು ವಶಕ್ಕೆ ಪಡೆದಿದ್ದರು. ನಂತರ ಪೊಲೀಸರು ದೇವರಾಜೇಗೌಡರನ್ನು ಹೊಳೆನರಸೀಪುರಕ್ಕೆ ಕರೆದೊಯ್ದಿದ್ದರು. ಮೆಡಿಕಲ್ ಟೆಸ್ಟ್ ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.… Read More

Uncategorized
May 09, 2024
40 views 1 sec 0

ಎಸ್ಸೆಸ್ಸೆಲ್ಸಿ ಫಲಿತಾಂಶ; ಈ ಬಾರಿ ಕುಸಿತ

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ-1 ರ ಫಲಿತಾಂಶ ಪ್ರಕಟವಾಗಿದ್ದು, ಶೇ. 73.40ರಷ್ಟು ಫಲಿತಾಂಶವಾಗಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಕರ್ನಾಟಕ (Karnataka) ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ. ಒಟ್ಟು 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬಾಲಕರು – 2,87,416 (65.90%) ಹಾಗೂ ಬಾಲಕಿಯರು – 3,43,788 (81.11%) ತೇರ್ಗಡೆ ಹೊಂದಿದ್ದಾರೆ. ಶೇ. 94 ಫಲಿತಾಂಶದೊಂದಿಗೆ ಉಡುಪಿ ಮೊದಲ ಸ್ಥಾನದಲ್ಲಿದೆ. ಶೇ. 92.12 ನೊಂದಿಗೆ ದಕ್ಷಿಣ ಕನ್ನಡ ಹಾಗೂ ಶೇ.… Read More

Uncategorized
May 08, 2024
45 views 4 secs 0

ಸಲ್ಮಾನ್ ಮನೆ ಎದುರು ಗುಂಡು; ಮತ್ತೋರ್ವ ಆರೋಪಿ ಅರೆಸ್ಟ್

ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಎದುರು ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಮೊಹಮ್ಮದ್ ರಫೀಕ್ ಚೌಧರಿ (Mohammed Rafique Chaudhary) ಬಂಧಿತ ಆರೋಪಿ. ರಾಜಸ್ಥಾನದ ನಾಗೌರ್ ನಲ್ಲಿ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಕೂಡ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ತಂಡದ ಸದಸ್ಯ ಎನ್ನಲಾಗಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಐವರನ್ನು ಬಂಧಿಸಿದಂತಾಗಿದೆ. ಬಂಧಿತ ನಾಲ್ವರ ಪೈಕಿ ಓರ್ವ ವ್ಯಕ್ತಿ… Read More